ಲೇಖನ :- ಚಿದಂಬರನಾಮ ಝೇಂಕರಿಸಿದ ಸಂತ ರಾಜಾರಾಮ
ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರ ಭಕ್ತ ಸಂತ ಶ್ರೀ ರಾಜಾರಾಮ್ ಲೇಖನ :- ಚಿದಂಬರನಾಮ ಝೇಂಕರಿಸಿದ ಸಂತ ರಾಜಾರಾಮ ಯದಾಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ । ಅಭ್ಯುತ್ಥಾನಮಧರ್ಮಸ್ಯ ತದಾSSತ್ಮಾನಂ ಸೃಜಾಮ್ಯಹಮ್ ಧರ್ಮ ಕಳೆಗುಂದಿದಾಗೆಲ್ಲ, ಅಧರ್ಮ ತಲೆಯತ್ತಿದಾಗೆಲ್ಲ ನಾನು ನನ್ನನ್ನು ಹುಟ್ಟಿಸಿಕೊಳ್ಳುತ್ತೇನೆ. ಇಡಿಯ ಪ್ರಪಂಚದಲ್ಲಿ ಯಾವಾಗ-ಯಾವಾಗ ಧರ್ಮ ಮಲೀನವಾಗಿ ಅಧರ್ಮದ ಮುಂದೆ ಸೋಲೊಪ್ಪಿಕೊಂಡು, ತಲೆ ಕೆಳಗಾಗಿ ನಿಲ್ಲುವ ಪ್ರಸಂಗ ಬರುತ್ತದೋ, ಆಗ ನಾನು ಧರೆಗಿಳಿದು ಬರುತ್ತೇನೆ ಎನ್ನುತ್ತಾನೆ ಕೃಷ್ಣ. ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್ । ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇಯುಗೇ ಸಜ್ಜನರನ್ನು ಉಳಿಸಲೆಂದು, ಕೇಡಿಗರನ್ನು ಅಳಿಸಲೆಂದು, ಧರ್ಮವನ್ನು ನೆಲೆಗೊಳಿಸಲೆಂದು ಯುಗ ಯುಗದಲ್ಲೂ ಮೂಡಿಬರುತ್ತೇನೆ ಎಂದು ಕೃಷ್ಣ ಹೇಳಿದ್ದಾನೆ. ದೇಶ ಕಾಲ ಭೇದ ತೋರದೆ ಬೇರೆಬೇರೆ ಪ್ರಾಂತಗಳಲ್ಲಿ ಬೇರೆ ಬೇರೆ ರೂಪಗಳಿಂದ ಅವತರಿಸಿ ಬಂದು ಶಿಷ್ಟ ರಕ್ಷಣೆ ದುಷ್ಟ ಶಿಕ್ಷಣೆ ಭಗವಂತ ಮಾಡಿದ್ದಾನೆ. ಆದರಂತೆಯೇ ನಮ್ಮ ಕರ್ನಾಟಕದ ಸುಕ್ಷೇತ್ರ ಮುರಗೋಡ ಗ್ರಾಮದ ಭಕ್ತ ವಾತ್ಸಲನಾದ ಭಕ್ತರ ಅಭೀಷ್ಟವ ಈಡೇರಿಸುವ ಭಕ್ತ...